ಕುತ್ಲೂರು ಗ್ರಾಮದ ಮನೆಯೊಂದರ ಬಾಗಿಲು ತಟ್ಟಿದ ಅಪರಿಚಿತ ತಂಡ!

Share with

ಬೆಳ್ತಂಗಡಿ: ನಕ್ಸಲ್​ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕುತ್ಲೂರು ಗ್ರಾಮದ ಪುಂಜಾಜೆ ಮನೆ ನಿವಾಸಿ ಜೋಸಿ ಆಂಟನಿ ಅವರ ಮನೆಯ ಬಾಗಿಲನ್ನು ನ.21ರ ರಾತ್ರಿ ಐದು ಜನ ಅಪರಿಚಿತರ ತಂಡ ತಟ್ಟಿದ ಘಟನೆ ನಡೆದಿದೆ.

ಅಪರಿಚಿತ ತಂಡದವರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅದರಲ್ಲಿ ನಾಲ್ವರು ಪುರುಷರು ನೀಲಿ ಬಣ್ಣದ ಬಟ್ಟೆ ಧರಿಸಿದ್ದು, ಓರ್ವ ಮಹಿಳೆ ಖಾಕಿ ಬಟ್ಟೆ ಧರಿಸಿ, ಕೈಯಲ್ಲಿ ಮಾರಕಸ್ತ್ರಗಳನ್ನು ಹಿಡಿದು ಬಂದಿದ್ದರು ಎನ್ನಲಾಗಿದೆ. ಜೊತೆಗೆ ಮನೆಯ ಬಾಗಿಲನ್ನು ತೆಗೆಯದೇ ಇದ್ದಾಗ, ಹಾರೆಯಲ್ಲಿ ಮೀಟಿ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ್ದಾಗಿ ಮನೆ ನಿವಾಸಿ ಜೋಸಿ ಆಂಟನಿ ಅವರು ಹೇಳಿದ್ದಾರೆ.

ಕುತ್ಲೂರು ಗ್ರಾಮದ ಪುಂಜಾಜೆ ಮನೆ ನಿವಾಸಿ ಜೋಸಿ ಆಂಟನಿ.

ರಾತ್ರಿ ಆಗಮಿಸಿದ್ದ ಅಪರಿಚಿತ ತಂಡದವರು ಬಾಗಿಲು ತೆಗೆಯಲು ಪ್ರಯತ್ನಿಸುತ್ತಿದ್ದಂತೆ ಮನೆಯ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ವೇಣೂರು ಮತ್ತು ಬೆಳ್ತಂಗಡಿ ಪೊಲೀಸರು ದೌಡಾಯಿಸಿದ್ದಾರೆ. ಅಪರಿಚಿತ ತಂಡವು ವೇಣೂರು ಪೊಲೀಸರು ಎಂದು ಹೇಳಿ ಪರಿಚಯ ಮಾಡಿಕೊಂಡು ಬಾಗಿಲು ತೆಗೆಯಿರಿ ಎಂದು ಹೇಳಿದ್ದರಂತೆ. ಬಂದಿದ್ದವರು ನಕ್ಸಲರು ಎಂಬ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *