ಉಪ್ಪಳ: ಬಿಜೆಪಿಯ ಹಿರಿಯ ಕಾರ್ಯಕರ್ತ ರಾಧಾಕೃಷ್ಣ ಶೆಟ್ಟಿ ನಿಧನ

Share with

ಉಪ್ಪಳ: ಇಚ್ಲಂಗೋಡು ಗೋಳಿತ್ತಡಿ ಅಕ್ಕಾರಿ ಹಿತ್ಲು ನಿವಾಸಿ ಬಿಜೆಪಿ, ಆರ್.ಎಸ್.ಎಸ್ ಸಕ್ರೀಯ ಕಾರ್ಯಕರ್ತ ರಾಧಾಕೃಷ್ಣ ಶೆಟ್ಟಿ [64] ಅಸೌಖ್ಯದಿಂದ ನ.28ರಂದು ಬೆಳಿಗ್ಗೆ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಬಿಜೆಪಿಯ ಹಿರಿಯ ಕಾರ್ಯಕರ್ತ ರಾಧಾಕೃಷ್ಣ ಶೆಟ್ಟಿ ನಿಧನರಾದರು.

ಕಳೆದ ಒಂದು ವಾರದ ಹಿಂದೆ ಅಸೌಖ್ಯ ಬಾಧಿಸಿ ಮಂಗಳೂರು ಹಾಗೂ ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇವರು ಈ ಹಿಂದೆ ಹಲವು ವರ್ಷಗಳ ಕಾಲ ಕುಬಣೂರು ವಿದ್ಯಾನಗರದಲ್ಲಿ ವ್ಯಾಪಾರಿಯಾಗಿದ್ದರು. ಕೃಷಿಕರೂ ಆಗಿದ್ದಾರೆ. ಇಚ್ಲಂಗೋಡು ಶ್ರೀ ಮಹಾಗಣಪತಿ ಮಹಾವಿಷ್ಣು ಸದಾಶಿವ ದೇವಸ್ಥಾನದ ಆಡಳಿತ ಹಾಗೂ ಜೀರ್ಣೋದ್ದಾರ ಸಮಿತಿಗಳಲ್ಲಿ ಪದಾಧಿಕಾರಿಯಾಗಿ, ಮಂಗಲ್ಪಾಡಿ ಸೇವಾ ಸಹಕಾರಿ ಬ್ಯಾಂಕ್ ಮಾಜಿ ನಿರ್ಧೇಶಕರಾಗಿ ಸೇವೆಸಲ್ಲಿಸಿದ್ದಾರೆ.

ಮೃತರು ಪತ್ನಿ ಗೀತಾ, ಮಕ್ಕಳಾದ ರಾಕೇಶ್, ರಕ್ಷಿತ್, ಸೊಸೆ ಶ್ರುತಿ, ಸಹೋದರ, ಸಹೋದರಿಯರಾದ ಪಕೀರ ಶೆಟ್ಟಿ, ರಘುನಾಥ ಶೆಟ್ಟಿ, ಸಂಕಪ್ಪ ಶೆಟ್ಟಿ, ಗೋಪಿ, ದೇವಕಿ, ರಾಜೀವಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಂದೆ ಐತ್ತಪ್ಪ ಶೆಟ್ಟಿ ತಾಯಿ ಕಮಲ ಈ ಹಿಂದೆ ನಿಧನರಾಗಿದ್ದಾರೆ.


Share with

Leave a Reply

Your email address will not be published. Required fields are marked *