ಡಿ.10: ಕೊಂಡೆವೂರಿನಲ್ಲಿ ಹೋಮಿಯೋಪತಿ ಗೋಚಿಕಿತ್ಸೆ, ಮಾಹಿತಿ ಶಿಬಿರ

Share with

ಉಪ್ಪಳ: ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಕಾಮಧೇನು ಗೋಶಾಲೆಯಲ್ಲಿ ದಿ.10.12.202 ಆದಿತ್ಯವಾರ ಅಪರಾಹ್ನ 3.00 ರಿಂದ 5.೦೦ ರ ವರೆಗೆ ಕೊಂಡೆವೂರಿನ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್, ರಾಮಚಂದ್ರಾಪುರ ಮಠದ ಕಾಮದುಘಾ ಟ್ರಸ್ಟ್ ಮತ್ತು ಮುಂಬಯಿಯ ದಿನೇಶ್ ಬಾಹ್ರಾ ಫೌಂಡೇಶನ್ ಸಹಯೋಗದಲ್ಲಿ ಗೋಸಾಕುವವರಿಗಾಗಿ ಹೋಮಿಯೋಪತಿ ಗೋಚಿಕಿತ್ಸೆ ಮತ್ತು ಮಾಹಿತಿ ಶಿಬಿರವನ್ನು ಆಯೋಜಿಸಲಾಗಿದೆ.

ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮಂಗಳೂರಿನ ಡಾ.ಮನೋಹರ ಉಪಾಧ್ಯಾಯರು ಶಿಬಿರ ನಡೆಸಿಕೊಡಲಿದ್ದಾರೆ. ಆಸಕ್ತ ಗೋಪಾಲಕರು ಈ ಶಿಬಿರದ ಸದುಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡಕೊಳ್ಳಬೇಕೆಂದು ಶ್ರೀಮಠದ ಪ್ರಕಟಣೆಯಲ್ಲಿ ವಿನಂತಿಸಿಕೊಳ್ಳಲಾಗಿದೆ.


Share with

Leave a Reply

Your email address will not be published. Required fields are marked *