ಹುತಾತ್ಮ ಯೋಧ ಎಂ.ವಿ ಪ್ರಾಂಜಲ್ ಕುಟುಂಬಕ್ಕೆ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ವಿತರಣೆ

Share with

ಬೆಂಗಳೂರು: ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ನೀಡಲಾಯಿತು.

ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ನೀಡಲಾಯಿತು.

ಜಮ್ಮು ಕಾಶ್ಮೀರದಲ್ಲಿ ಕಳೆದ ತಿಂಗಳು ನಡೆದ ಉಗ್ರರ ಕಾದಾಟದಲ್ಲಿ ಕರ್ನಾಟಕ ಮೂಲದ ಪ್ರಾಂಜಲ್‌ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಲಕ್ಷ ರೂಪಾಯಿ ಪರಿಹಾರ ಧನವನ್ನು ಘೋಷಣೆ ಮಾಡಿದ್ದರು. ಅಂತೆಯೇ, ಡಿ.4ರಂದು ತಡರಾತ್ರಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿತ್ತು.

ಸಿಎಂ ಸಿದ್ದರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ್ ಅವರು ಪ್ರಾಂಜಲ್‌ ಅವರ ಕುಟುಂಬ ಸದಸ್ಯರಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಸೈನಿಕ‌ ಕಲ್ಯಾಣ ನಿರ್ದೇಶಕರಾದ ಶಶಿಧರ್ ಅವರು ಉಪಸ್ಥಿತರಿದ್ದರು. 


Share with

Leave a Reply

Your email address will not be published. Required fields are marked *