ಕಡಬ: ಮೇಯಲು ಬಿಟ್ಟಿದ್ದ ದನ ಸಾವು; ಆನೆ ದಾಳಿ ಶಂಕೆ

Share with

ಕಡಬ: ಮೇಯಲು ಬಿಟ್ಟಿದ್ದ ದನವೊಂದು ತೋಟದಲ್ಲಿ ಗಾಯಗೊಂಡು ಸಾವನ್ನಪ್ಪಿದ್ದ ಘಟನೆ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದ್ದು, ಆನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಮೇಯಲು ಬಿಟ್ಟಿದ್ದ ದನ ಸಾವು

ಡಿ.5ರಂದು ಕೊಣಾಜೆ ದೊಡ್ಡಮನೆ ನಿವಾಸಿ ಅಶೋಕ್ ಎಂಬುವವರಿಗೆ ಸೇರಿದ ದನವನ್ನು ಮೇಯಲು ಬಿಡಲಾಗಿತ್ತು. ಸಂಜೆಯ ವೇಳೆಗೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಡಿ.6ರಂದು ಬೆಳಗ್ಗೆ ಮತ್ತೆ ಹುಡುಕಾಟ ನಡೆಸಿದಾಗ ತೋಟದಲ್ಲಿ ದನ ಗಾಯಗೊಂಡು ಸತ್ತು ಬಿದ್ದಿರುವುದು ಕಂಡು ಬಂದಿದೆ.

ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ ಕಾಡಾನೆ ಬಂದಿರುವ ಬಗ್ಗೆ ಸ್ಥಳೀಯರು ಸಂಶಯವನ್ನು ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *