ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ಏರ್‌ಇಂಡಿಯಾ ವಿಮಾನ ಕೊನೆ ಕ್ಷಣದಲ್ಲಿ ರದ್ದು: ಪ್ರಯಾಣಿಕರಿಂದ ಆಕ್ರೋಶ

Share with

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನ ಕಡೆಯ ಕ್ಷಣದಲ್ಲಿ ರದ್ದಾಗಿದ್ದು ಏರ್ ಇಂಡಿಯಾ ಸಿಬ್ಬಂದಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ.23ರಂದು ನಡೆದಿದೆ.

ಏರ್ ಇಂಡಿಯಾ ಸಿಬ್ಬಂದಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ರಾತ್ರಿ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಾರಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೇ ಕ್ಷಣದಲ್ಲಿ ರದ್ದಾಗಿದ್ದು, ಇದರಿಂದ ಕೋಪಗೊಂಡ ಪ್ರಯಾಣಿಕರು ಆಕ್ರೋಶ ಹೊರ ಹಾಕಿದರು. ತಾಂತ್ರಿಕ ಅಡಚಣೆಯಿಂದಾಗಿ ವಿಮಾನಯಾನ ಕ್ಯಾನ್ಸಲ್ ಮಾಡಲಾಗಿತ್ತು. ಬಳಿಕ ಪರ್ಯಾಯ ವ್ಯವಸ್ಥೆ ಮಾಡಿ ರಾತ್ರಿ 2:15ಕ್ಕೆ ಬೇರೊಂದು ವಿಮಾನದ ಮೂಲಕ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಯಿತು ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *