ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಅಗ್ನಿಶಾಮಕದಳದವರಿಂದ ರಕ್ಷಣೆ

Share with

ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್‌ ವೊಂದರಲ್ಲಿ ಡಿ.25ರಂದು ನಡೆದಿದೆ.

ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಅಗ್ನಿಶಾಮಕದಳದವರಿಂದ ರಕ್ಷಣೆ

ಸುಮಾರು 3 ವರ್ಷದ ಮಗು ಆಟವಾಡುತ್ತಾ ನಾಲ್ಕನೇ ಮಹಡಿಯ ಫ್ಲ್ಯಾಟ್‌ ನ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿಕೊಂಡಿದ್ದು, ಪೋಷಕರು ಎಷ್ಟೇ ಪ್ರಯತ್ನಿಸಿದರು ಬಾಗಿಲು ತೆಗೆಯಲು ಸಾಧ್ಯವಾಗಿರಲಿಲ್ಲ. ಮಗು ಕೋಣೆಯೊಳಗೆ ಬಾಕಿಯಾಗಿ ಮನೆಯವರು ಗಾಬರಿಯಾಗಿದ್ದರು. ಬಳಿಕ ಮಗುವಿನ ರಕ್ಷಣೆಗಾಗಿ ಪಾಂಡೇಶ್ವರ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು.

ಬಳಿಕ ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ಅಧಿಕಾರಿ ರಾಜಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಹಗ್ಗದ ಮೂಲಕ 4ನೇ ಮಹಡಿಯ ಮೇಲಿನಿಂದ ಮಗುವಿದ್ದ ಕೋಣೆಯ ಒಳಗೆ ತೆರಳಿ ಮಗುವನ್ನು ರಕ್ಷಣೆ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *