ಉಡುಪಿ: ಹಸುವೊಂದು ಅಟ್ಟಿಸಿಕೊಂಡು ಬಂದು ಬೈಕ್ ಗೆ ತಿವಿದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಬಳಿ ನಡೆದಿದೆ.
![ಹಸುವೊಂದು ಅಟ್ಟಿಸಿಕೊಂಡು ಬಂದು ಬೈಕ್ ಗೆ ತಿವಿದ ಪರಿಣಾಮ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯ](https://i0.wp.com/veekshakavani.com/wp-content/uploads/2024/03/ಸವಾರ-ಗಂಭೀರ.jpg?resize=640%2C400&ssl=1)
ಗಾಯಗೊಂಡ ಸವಾರನನ್ನು ಪರ್ಕಳದ ನಿವಾಸಿ 25 ವರ್ಷದ ಶೈಲೇಶ್ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದಿಂದ ಗಾಯಾಳುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ.