ಸುಳ್ಯ: ಹೊಳೆಯ ಪಾಲ ದಾಟುತ್ತಿರುವ ಸಂದರ್ಭದಲ್ಲಿ ಆಯ ತಪ್ಪಿ ಹೊಳಗೆ ಬಿದ್ದು ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕದಿಂದ ವರದಿಯಾಗಿದೆ.
![ಆಯತಪ್ಪಿ ಬಿದ್ದು ಹೊಳೆಯಲ್ಲಿ ಕೊಚ್ಚಿ ಹೋದ ವ್ಯಕ್ತಿ](https://i0.wp.com/veekshakavani.com/wp-content/uploads/2023/07/New-Project-22.jpg?resize=640%2C400&ssl=1)
ನೀರು ಪಾಲಾಗಿರುವ ವ್ಯಕ್ತಿಯನ್ನು ಕೇರಳ ಮೂಲದವರು ಎಂದು ಹೇಳಲಾಗಿದ್ದು ತೋಟದಲ್ಲಿ ಕೂಲಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಸಂಧರ್ಭ ಈ ಘಟನೆ ಸಂಭವಿಸಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಸುಳ್ಯ ಪೊಲೀಸರು ಭೇಟಿ ನೀಡಿ ಕಾಣೆಯಾಗಿರುವ ವ್ಯಕ್ತಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.