ಮತ್ತೆ ಜೈಲು ಪಾಲಾದ ನಟ ದರ್ಶನ್..! ಸುಪ್ರೀಂ ಕೋರ್ಟ್ ನಿಂದ ಜಾಮೀನು ರದ್ದು

Share with

ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಸುಪ್ರೀಂ ಕೋರ್ಟ್ ಗುರುವಾರ (ಆ.14) ಜಾಮೀನು ರದ್ದು ಮಾಡಿ ಆದೇಶ ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮಹದೇವನ್ ಅವರ ವಿಭಾಗೀಯ ಪೀಠ ಗುರುವಾರ ದರ್ಶನ್‌ ಆ್ಯಂಡ್ ಗ್ಯಾಂಗ್‌ನ ಜಾಮೀನು ಅರ್ಜಿ ತೀರ್ಪು ಪ್ರಕಟಿಸಿದೆ. ಕಳೆದ ಕೆಲ ದಿನಗಳಿಂದ ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ಸುಪ್ರೀಂ ಕೋರ್ಟ್ ಗುರುವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಸಾಕ್ಷಿಗಳ ಬೆದರಿಕೆ ಮತ್ತು ಇತರ ಅಕ್ರಮಗಳನ್ನು ಸಮರ್ಪಕವಾಗಿ ಪರಿಗಣಿಸದೆ ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ರದ್ದುಗೊಳಿಸಿದೆ ಎಂದು ಪೀಠ ಹೇಳಿದೆ. ಹೈಕೋರ್ಟ್‌ನ ಆದೇಶವನ್ನು “ವಿಕೃತ” ಮತ್ತು “ಸಂಪೂರ್ಣವಾಗಿ ಅನಗತ್ಯ” ಎಂದು ಕರೆದರು.

“ಜಾಮೀನು ನೀಡಲು ಯಾವುದೇ ಕಾನೂನು ಕಾರಣವಿಲ್ಲ” ಎಂದು ಹೇಳಿದ ಪೀಠ, ದರ್ಶನ್ ಅವರ ಸ್ವಾತಂತ್ರ್ಯವು “ನ್ಯಾಯದ ಆಡಳಿತವನ್ನು ಹಳಿತಪ್ಪಿಸುವ ಅಪಾಯವನ್ನುಂಟುಮಾಡಿದೆ” ಎಂದು ಹೇಳಿದರು.

“ಕಾನೂನಿಗಿಂತ ಯಾವುದೇ ವ್ಯಕ್ತಿ ದೊಡ್ಡವರಲ್ಲ, ಕಾನೂನಿಗೆ ವಿಧೇಯತೆ ಒಂದು ನಿಯಮ, ಉಪಕಾರವಲ್ಲ. ಕಸ್ಟಡಿಯಲ್ಲಿರುವ ದರ್ಶನ್‌ಗೆ ಯಾವುದೇ ವಿಶೇಷ ಉಪಚಾರ ನೀಡಬಾರದು” ಎಂದು ಪೀಠವು ರಾಜ್ಯ ಮತ್ತು ಜೈಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತು.

“ಕಾನೂನಿಗಿಂತ ಯಾವುದೇ ವ್ಯಕ್ತಿ ದೊಡ್ಡವರಲ್ಲ, ಕಾನೂನಿಗೆ ವಿಧೇಯತೆ ಒಂದು ನಿಯಮ, ಉಪಕಾರವಲ್ಲ. ಕಸ್ಟಡಿಯಲ್ಲಿರುವ ದರ್ಶನ್‌ಗೆ ಯಾವುದೇ ವಿಶೇಷ ಉಪಚಾರ ನೀಡಬಾರದು” ಎಂದು ಪೀಠವು ರಾಜ್ಯ ಮತ್ತು ಜೈಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತು.

“ಆರೋಪಿಗಳಿಗೆ ಜೈಲು ಆವರಣದಲ್ಲಿ ಪಂಚತಾರಾ ಗೌರವ ನೀಡಲಾಗುತ್ತಿದೆ ಎಂದು ನಮಗೆ ತಿಳಿದ ದಿನವೇ ನಾವು ಜೈಲು ಸೂಪರಿಂಟೆಂಡೆಂಟ್ ಅನ್ನು ಅಮಾನತುಗೊಳಿಸುತ್ತೇವೆ” ಎಂದು ನ್ಯಾ.ಪಾರ್ದಿವಾಲಾ ಹೇಳಿದರು. ಜೈಲಿನಲ್ಲಿ ಧೂಮಪಾನ ಮಾಡಲು ಅಥವಾ ಮದ್ಯಪಾನ ಮಾಡಲು ಅವಕಾಶ ನೀಡದಂತೆ ಎಚ್ಚರಿಕೆ ನೀಡಿದರು.

2024ರ ಜೂನ್ 9ರಂದು ದರ್ಶನ್ ಆ್ಯಂಡ್ ಗ್ಯಾಂಗ್‌ ಬೆಂಗಳೂರಿನ ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಹತ್ಯೆಗೈದಿತ್ತು. ಈ ಸಂಬಂಧ ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಹೈಕೋರ್ಟ್ ಆರೋಪಿಗಳಿಗೆ ಡಿಸೆಂಬರ್‌ನಲ್ಲಿ ಜಾಮೀನು ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.


Share with

Leave a Reply

Your email address will not be published. Required fields are marked *