ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶದ ಆರೋಪ: ದೂರು ದಾಖಲು

Share with

ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಸುಳ್ಯ: ತಂಡವೊಂದು ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯದ ಡಾ| ಜ್ಯೋತಿ ಆರ್ ಪ್ರಸಾದ್ ಎಂಬವರು ನೀಡಿದ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ದೂರುದಾರರ ಬಾವ ಡಾ|ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್ ಕೆ.ಸಿ, ಮಗಳು ಡಾ| ಐಶ್ವರ್ಯ, ಸಂಬಂಧಿ ಹೇಮನಾಥ ಕೆ.ವಿ ಜಗದೀಶ್ ಅಡ್ತಲೇ ಮತ್ತು ಇತರ ಕೆಲವರು ಅಕ್ರಮ ಪ್ರವೇಶ ಮಾಡಿದವರೆಂದು ದೂರಿನಲ್ಲಿ ತಿಳಿಸಲಾಗಿದ್ದು, ಡಾ| ಜ್ಯೋತಿ ಎಂಬವರು ನೀಡಿದ ದೂರಿನಂತೆ ಐಪಿಸಿ ಕಲಂ 448, 506 ಜೊತೆಗೆ 34ರಂತೆ ಪ್ರಕರಣವನ್ನು ದಾಖಲಿಸಲಾಗಿದೆ.

ಸೆ.6ರಂದು ಡಾ| ಜ್ಯೋತಿ ಆರ್ ಪ್ರಸಾದ್ ಅವರು ಮಂಗಳೂರಿಗೆ ಹೋಗಿದ್ದು ಈ ವೇಳೆ ಆರೋಪಿಗಳು ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಅಕ್ರಮ ಪ್ರವೇಶವನ್ನು ಮಾಡಿ, ಕಾಲೇಜಿನಲ್ಲಿದ್ದ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರ ಮೊಬೈಲ್‌ಗಳನ್ನು ಕೇಳಿ ಪಡೆದು, ಸಿ.ಸಿ ಕ್ಯಾಮರಗಳ ಹಾಗೂ ಇತರ ಮಾಹಿತಿ ಪಡೆದು, ಮೊಬೈಲ್‌ಗಳನ್ನು ಹಿಂತಿರುಗಿಸಿ, ಬೆದರಿಸಿ ಹೋಗಿರುತ್ತಾರೆ ಎಂದು ಆರೋಪಿಸಿದ್ದಾರೆ.


Share with

Leave a Reply

Your email address will not be published. Required fields are marked *