ಉಗ್ರರ ದಾಳಿ ಬೆನ್ನಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳೊಂದಿಗಿನ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನಕ್ಕೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿ ಮತ್ತು ವೈದ್ಯಕೀಯ ವೀಸಾಗಳನ್ನು ಸಹ ರದ್ದುಗೊಳಿಸಲಾಗಿದೆ.





