ಉಡುಪಿ: ವಂಚನೆ ಪ್ರಕರಣದಲ್ಲಿ ಬಂಧನದಲ್ಲಿರುವ ಚೈತ್ರಾ ಕುಂದಾಪುರ ಅವರ ವಿರುದ್ಧ ಮತ್ತೊಂದು ವಂಚನೆ ಪ್ರಕರಣವು ದಾಖಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿರುವ ಆರೋಪದಡಿ ಸಿಸಿಬಿ ಪೊಲೀಸರು ಚೈತ್ರಾ ಅವರನ್ನು ಬಂಧಿಸಿದ್ದು ಈಗಾಗಲೇ ವಿಚಾರಣೆ ನಡೆಸುತ್ತಿದ್ದಾರೆ.
![](https://i0.wp.com/veekshakavani.com/wp-content/uploads/2023/09/IMG-20230919-WA0112.jpg?resize=271%2C233&ssl=1)
ಇದೀಗ ಮತ್ತೊಂದು ವಂಚನೆ ಪ್ರಕರಣವು ಚೈತ್ರಾ ಕುಂದಾಪುರ ಅವರ ಮೇಲೆ ದಾಖಲಾಗಿದ್ದು, ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ೫ ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಸುಧೀನ್ ಎಂಬುವರು ಬ್ರಹ್ಮಾವರ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.