ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲಾ ಗಡಿ ಭಾಗವಾದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಹಬ್ಬಿದೆ. ಸುಮಾರು 8 ಜನರಿರುವ ನಕ್ಸಲರ ತಂಡವೊಂದು ಕೂಜಿಮಲೆ, ಕಲ್ಮುಕಾರು ಎಂಬಲ್ಲಿನ ಅಂಗಡಿಯೊಂದರಿಂದ ನಗದು ಪಾವತಿಸಿ ದಿನಸಿ ಖರೀದಿಸಿದ್ದಾರೆ ಎನ್ನಲಾಗಿದೆ. ನಕ್ಸಲರೆಂಬ ಶಂಕೆ ಹಿನ್ನೆಲೆಯಲ್ಲಿ ಪೊಲೀಸರು, ಎಎನ್ಎಫ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೂಜುಮಲೆ ಕಡಮಕಲ್ಲು ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆಂಬ ಮಾಹಿತಿಯ ಆಧಾರದಲ್ಲಿ ಸ್ಥಳಕ್ಕೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿದ್ದು, ಈ ಭಾಗದ ಬೇರೆ ಬೇರೆ ಪ್ರದೇಶಗಳಲ್ಲಿ ಕೂಂಬಿಂಗ್ ಆರಂಭಿಸಿರುವುದಾಗಿ ತಿಳಿದು ಬಂದಿದೆ.