ಮಂಗಳೂರು: ಬಿಜೆಪಿ ಪಕ್ಷ ಸೇರಿದ ಅರುಣ್ ಕುಮಾರ್ ಪುತ್ತಿಲ

Share with

ಮಂಗಳೂರು: ಅರುಣ್ ಕುಮಾರ್ ಪುತ್ತಿಲ ಅವರು ಮಾ.16ರಂದು ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು. ಅವರನ್ನು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪಕ್ಷದ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಸ್ವಾಗತಿಸಿ ಪುತ್ತಿಲ ಪರಿವಾರದ ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಪಕ್ಷದ ಸದಸ್ಯತ್ವವನ್ನು ಹಸ್ತಾಂತರಿಸಿದರು.

ಅರುಣ್ ಕುಮಾರ್ ಪುತ್ತಿಲ ಅವರು ಮಾ.16ರಂದು ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು.

ನಂತರ ಮಾತನಾಡಿದ ಸತೀಶ್ ಕುಂಪಲ ಅವರು ಪಕ್ಷದೊಳಗೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಬಗೆಹರಿಸಿಕೊಳ್ಳುತ್ತೇವೆ. ಇನ್ನು ಮುಂದೆ ಪುತ್ತಿಲ ಪರಿವಾರ ಎಂಬುದು ಇಲ್ಲ. ಎಲ್ಲವೂ ಬಿಜೆಪಿ ಹೆಸರಿನಲ್ಲಿಯೇ ನಡೆಯಲಿದೆ. ನಾವೆಲ್ಲರೂ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ. ಅಲ್ಲದೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡುವ ಗುರಿ ಇದೆ ಎಂದರು.

ಅರುಣ್ ಕುಮಾರ್ ಪುತ್ತಿಲ ಅವರನ್ನು ಸತೀಶ್ ಕುಂಪಲ ಅವರು ಪಕ್ಷದ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಸ್ವಾಗತಿಸಿ ಪುತ್ತಿಲ ಪರಿವಾರದ ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಪಕ್ಷದ ಸದಸ್ಯತ್ವವನ್ನು ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತಿಲ ಪರಿವಾರವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಲಾಗಿದೆ. ನರೇಂದ್ರ ಮೋದಿ ನೇತೃತ್ವದ ಸರಕಾರ ದೇಶಕ್ಕೆ ಇನ್ನೂ 10 ವರ್ಷಗಳ ಕಾಲ ಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.


Share with

Leave a Reply

Your email address will not be published. Required fields are marked *