ಕಾಸರಗೋಡು: ಪಿಲಿಕುಂಜೆಯಲ್ಲಿ ಯುವಕರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ರಾತ್ರಿ ತಳಂಗರೆಯ ಖಾಸಿಲೈನ್ನ ಮುದಾಸಿರ್ (21) ಮತ್ತು ತನ್ಸೀ ರ್ (20) ಅವರಿಗೆ ಹಲ್ಲೆ ಮಾಡಲಾಗಿತ್ತು. ಈ ಕುರಿತು ಸಿನಾನ್, ನಿಯಾಸ್, ಮಿಯಾದ್, ಅಸರುದ್ದೀನ್ ಹಾಗೂ ಇನ್ನೋರ್ವನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ.