ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ಮತ್ತು ಕಾರು ಡಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾ.17ರಂದು ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಬಾಂಬಿಲ ಎಂಬಲ್ಲಿ ನಡೆದಿದೆ.
ಕಾರು ಚಾಲಕರಾದ ಕಾವಳಪಡೂರು ಗ್ರಾಮದ ಮಧ್ವಪಲ್ಕೆ ನಿವಾಸಿ ಸಿರಿಲ್ ಡಿಸೋಜ ಅವರು ಗಾಯಾಳುವಾಗಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಬಸ್, ವಗ್ಗ ಕಡೆಗೆ ತೆರಳುತ್ತಿದ್ದ ಕಾರ್ಗೆ ಬಾಂಬಿಲ ಸೇತುವೆ ಬಳಿಯ ತಿರುವಿನಲ್ಲಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಯಲ್ಲಿ ಕಾರಿನ ಮುಂಭಾಗ ಬಸ್ನ ಅಡಿಯಲ್ಲಿ ಸಿಲುಕಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬಂಟ್ವಾಳ ಟ್ರಾಫಿಕ್ ಎಸ್ಐ ಸುತೇಶ್ ಹಾಗೂ ಬಂಟ್ವಾಳ ಗ್ರಾಮಾಂತರ ಎಸ್ಐ ಹರೀಶ್ ಅವರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದರು.