ಬಂಟ್ವಾಳ: ಮಲಗಿದ್ದಲ್ಲೇ ಯುವಕ ಹೃದಯಾಘಾತದಿಂದ ಮೃತ್ಯು

Share with

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11ರಂದು ಬೆಳಿಗ್ಗೆ ನಡೆದಿದೆ.

ಮೆಲ್ಕಾರ್ ನಿವಾಸಿ ಉದಯ

ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಇವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು.

ಮಾ.11ರಂದು ಬೆಳಿಗ್ಗೆ ಉದಯ ಎದ್ದಿಲ್ಲಾ ಎಂದು ಮನೆಯವರು ಎಚ್ಚರಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ,ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಯುವಕ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ. ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *