ಬೆಳ್ತಂಗಡಿ:ಎರಡು ಕರುಗಳನ್ನು ಕೊಂದು ತಿಂದ ಚಿರತೆ!

Share with

ಬೆಳ್ತಂಗಡಿ: ಬೆಳ್ತಂಗಡಿಯ ಮುಂಡೂರು ಬಳಿ ಭಾನುವಾರ ರಾತ್ರಿ ಮನೆ ಹತ್ತಿರ ಕಟ್ಟಿ ಹಾಕಿದ ಎರಡು ಕರುಗಳನ್ನು ಚಿರತೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ನಡೆದಿದೆ.

ಮುಂಡೂರು ಗ್ರಾಮದ ಕೇರಿಯಾರ್ ಎಂಬಲ್ಲಿ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಕರುಗಳ ಮೇಲೆ ಭಾನುವಾರ ರಾತ್ರಿ ದಾಳಿ ಮಾಡಿದ ಚಿರತೆ ತೋಟಕ್ಕೆ ಎಳೆದೊಯ್ದು ತಿಂದು ಹಾಕಿದೆ.

ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಭಾಗದಲ್ಲಿ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆ ಅರಣ್ಯ ಇಲಾಖೆಗೆ ದೂರನ್ನು ನೀಡಲಾಗಿತ್ತು.


Share with

Leave a Reply

Your email address will not be published. Required fields are marked *