ಬೆಳ್ತಂಗಡಿ: ಎರಡು ಕಾರುಗಳ ನಡುವೆ ಡಿಕ್ಕಿ ; ಮೂವರಿಗೆ ಗಂಭೀರ ಗಾಯ

Share with

ಬೆಳ್ತಂಗಡಿ: ಗುರುವಾಯನಕೆರೆ – ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಏ. 21ರಂದು ಸಂಜೆ ನಡೆದಿದೆ.

ಅಳದಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಕಾರೊಂದು, ಗುರುವಾಯನಕೆರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ.ಗಾಯಗೊಂಡವರನ್ನು ಗೇರುಕಟ್ಟೆಯ ನಿವಾಸಿಗಳಾದ ಕುಸುಮಾವತಿ (75), ಭಾಗ್ಯವತಿ (50) ಮತ್ತು ವೈಭವ್ (23) ಎಂದು ಗುರುತಿಸಲಾಗಿದೆ.


Share with

Leave a Reply

Your email address will not be published. Required fields are marked *