ಡಾ.ಲಕ್ಷ್ಮೀನಾರಾಯಣ ಕೆ.ಎಸ್ ಅವರಿಗೆ “ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ” ರಾಜ್ಯ ಪ್ರಶಸ್ತಿ

Share with

ಡಾ.ಲಕ್ಷ್ಮೀನಾರಾಯಣ ಕೆ.ಎಸ್ ಅವರಿಗೆ “ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ” ರಾಜ್ಯ ಪ್ರಶಸ್ತಿ ಲಭಿಸಿದೆ.

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಕ್ಕೆ 2021-22 ಸಾಲಿನ “ಅತ್ಯುತ್ತಮ NSS ಘಟಕ” ರಾಜ್ಯ ಪ್ರಶಸ್ತಿ ಹಾಗೂ ಘಟಕದ ಯೋಜನಾಧಿಕಾರಿ ಡಾ.ಲಕ್ಷ್ಮೀನಾರಾಯಣ ಕೆ.ಎಸ್ ಅವರಿಗೆ “ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆ ಯೋಜನಾಧಿಕಾರಿ” ರಾಜ್ಯ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ರಾಜ್ಯಭವನದಲ್ಲಿ ಅ.11ರಂದು ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಡಾ.ಲಕ್ಷ್ಮೀನಾರಾಯಣ ಕೆ.ಎಸ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿದ್ದು, ಜೂನ್ 2019ರಲ್ಲಿ ಯೋಜನಾಧಿಕಾರಿಯಾಗಿ ನೇಮಕಗೊಂಡು ಜೂನ್ 2023 ರವರೆಗೆ ಯೋಜನಾಧಿಕಾರಿಯಾಗಿ ಘಟಕ 1ನ್ನು ಮುನ್ನಡಿಸಿದ್ದಾರೆ.

ಇವರ ಅವಧಿಯಲ್ಲಿ ಮೂರು ವಾರ್ಷಿಕ ವಿಶೇಷ ಶಿಬಿರಗಳ ಆಯೋಜನೆ, ಕೊರೊನ ಕಾಲದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಜಾಗೃತಿ, ಲಾಕ್ ಡೌನ್ ಸಂದರ್ಭ ವಿಶೇಷ ಕಾರ್ಯಕ್ರಮಗಳು, ಕೋವಿಡ್ ಲಸಿಕಾ ಜಾಗೃತಿ ಹಾಗೂ ಲಸಿಕಾ ಶಿಬಿರಗಳ ಆಯೋಜನೆ, ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸ್ವಯಂಸೇವಕರೇ ಸಂಪನ್ಮೂಲ ವ್ಯಕ್ತಿಗಳಾಗಿ ಸ್ವತಂತ್ರ ಭಾರತದ ಸಾಧಕರು ಹಾಗೂ ಸ್ವತಂತ್ರ ಹೋರಾಟಗಾರ ಕುರಿತಾಗಿ 75 ವಿಶೇಷ ಉಪನ್ಯಾಸಗಳ ಸರಣಿ ಆಯೋಜನೆ, ಇಂಗು ಗುಂಡಿಗಳ ನಿರ್ಮಾಣ, ಸ್ವಚ್ಛ ಭಾರತ ಕಾರ್ಯಕ್ರಮಗಳ ಆಯೋಜನೆ, ಪರಿಸರ ಸಂಬಂಧಿ ಹಾಗೂ ಜಲ ಸಂರಕ್ಷಣೆಗೆ ಕುರಿತಾದ ಕಾರ್ಯಕ್ರಮಗಳ ಆಯೋಜಸಿದ್ದರು.

ಗಣರಾಜ್ಯೋತ್ಸವ ಪೆರೇಡ್ ನಲ್ಲಿ ರಾಷ್ಟ್ರಮಟ್ಟದ ಹಾಗೂ ರಾಜ್ಯಮಟ್ಟದ ರಾಷ್ಟ್ರೀಯ ಭಾವೈಕ್ಯತೆ ಶಿಬಿರಗಳಲ್ಲಿ ಯುವಜನೋತ್ಸವಗಳಲ್ಲಿ, ನಾಯಕತ್ವ ತರಬೇತಿ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕರು ಇವರ ಅವಧಿಯಲ್ಲಿ ಭಾಗವಹಿಸಿದ್ದರು.

ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ರಾಜ್ಯಭವನದಲ್ಲಿ ಅ.11ರಂದು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.


Share with

Leave a Reply

Your email address will not be published. Required fields are marked *