![](https://i0.wp.com/veekshakavani.com/wp-content/uploads/2023/08/IMG_20230814_154119.jpg?resize=1024%2C813&ssl=1)
ಬಿಜೆಪಿಯ ಅವನತಿ ಕರ್ನಾಟಕದಿಂದಲೇ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ, ಮೋದಿ ಪ್ರಚಾರ ಮಾಡಿದರೆ ಗೆಲ್ಲುತ್ತೇವೆಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದರು.
ಆದರೆ ರಾಹುಲ್ ಪಾದಯಾತ್ರೆ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಗೆದ್ದಿದ್ದೇವೆ. ಆ ಮೂಲಕ 3 ದಶಕಗಳ ಬಳಿಕ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಇದಕ್ಕಾಗಿ ಜಿಲ್ಲಾ, ಬ್ಲಾಕ್ ಅಧ್ಯಕ್ಷರು & ಕಾರ್ಯಕರ್ತರು ಶ್ರಮಿಸಿದ್ದು, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.