ಸೇವಾಭಾರತಿ ಮಂಗಲ್ಪಾಡಿ ಇದರ ಆಶ್ರಯದಲ್ಲಿ  ಜನಾರ್ಧನ ಪ್ರತಾಪನಗರ ಸ್ಮರಣಾರ್ಥ ರಕ್ತದಾನ ಶಿಬಿರ

Share with


ಉಪ್ಪಳ: ಹೇರೂರು ಶಂಕರ ಆಳ್ವ ಮೆಮೋರಿಯಲ್ ಚಾರಿಟೇಬಲ್ ಸೊಸೈಟಿ ಸೇವಾಭಾರತಿ ಮಂಗಲ್ಪಾಡಿ ಮತ್ತು ಸೇವಾ ಸಹಕಾರಿ ಬ್ಯಾಂಕ್ ಮಂಗಲ್ಪಾಡಿ ಇದರ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ [ದಿ] ಜನಾರ್ಧನ ಪ್ರತಾಪನಗರ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ ಐಲ ಶ್ರೀ ದುರ್ಗಾಪರಮೇಶ್ವರೀ ಕಲಾಭವನದಲ್ಲಿ ನಡೆಯಿತು. ಹೇರೂರು ಶಂಕರ ಆಳ್ವ ಮೆಮೋರಿಯಲ್ ಚಾರಿಟೇಬಲ್ ಸೊಸೈಟಿ ಮಂಗಲ್ಪಾಡಿ ಇದರ ಅಧ್ಯಕ್ಷ ಕೃಷ್ಣ.ಪಿ ಬಂದ್ಯೋಡು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ರಾಷ್ಟಿçÃಯ ಸ್ವಯಸೇವಕ ಸಂಘದ ಮಂಜೇಶ್ವರ ಕಾರ್ಯವಾಹಕ ಮಹಾಬಲ ಅಧ್ಯಕ್ಷತೆ ವಹಿಸಿದರು. ಐಲ ಕ್ಷೇತ್ರದ ಆಡಳಿತ ಮೊಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು, ಮಂಗಳೂರು ಕೆ.ಎಂ.ಸಿ ಆಸ್ಪತ್ರೆ ವೈದ್ಯರಾದ ಡಾ.,ಇಶಾನ್, ಸೇವಾಭಾರತಿ ಕಾರ್ಯದರ್ಶಿ ಸತೀಶ್ ಶೆಟ್ಟಿ,   ಮಂಗಲ್ಪಾಡಿ  ಸೇವಾಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಪ್ರೇಮ್ ಕುಮಾರ್ ಐಲ ಉಪಸ್ಥಿತರಿದ್ದರು. ಸೇವಾಭಾರತಿ ಪ್ರಮುಖ್ ಸತೀಶ್ ಮಾಸ್ತರ್ ಸ್ವಾಗತಿಸಿ, ಪದ್ಮಾವತಿ ಟೀಚರ್ ನಿರೂಪಿಸಿದರು. ರಾಮಚಂದ್ರ ಬಲ್ಲಾಳ್ ವಂದಿಸಿದರು. ಸಭೆಯ ಬಳಿಕ ನಡೆದ ರಕ್ತದಾನ ಶಿಬಿರದಲ್ಲಿ 103 ಮಂದಿ  ಕಾರ್ಯಕರ್ತರು ರಕ್ತದಾನ ಮಾಡಿದರು. [   ಶಿರದಲ್ಲಿ ಸಭಾಕಾರ್ಯಕ್ರಮದ ಪೊಟೋ 27-8-2024 ಇಮೈಲ್ ]


Share with

Leave a Reply

Your email address will not be published. Required fields are marked *