ಮುಂಬೈ: 252 ಕೋಟಿ ರೂಪಾಯಿಗಳ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರ ಮಾದಕವಸ್ತು ವಿರೋಧಿ ಘಟಕ (ANC) ಬುಧವಾರ ಸಾಮಾಜಿಕ ಮಾಧ್ಯಮ ಪ್ರಭಾವಿ ಓರ್ಹಾನ್ ಅವತ್ರಮಣಿ(ಓರಿ) ಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಬೆಳಗ್ಗೆ 10 ಗಂಟೆಗೆ ಎಎನ್ಸಿಯ ಘಾಟ್ಕೋಪರ್ ಘಟಕದ ಮುಂದೆ ಹಾಜರಾಗುವಂತೆ ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದಲ್ಲಿ ಓರಿಯ ಪಾತ್ರದ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ ಮತ್ತು ತನಿಖೆ ಮುಂದುವರೆದಿದೆ.
ಪ್ರಭಾವಿಗಳು, ಸೆಲೆಬ್ರಿಟಿಗಳು ಮತ್ತು ಭೂಗತ ಜಗತ್ತಿನ ವ್ಯಕ್ತಿಗಳನ್ನು ಸಂಪರ್ಕಿಸಬಹುದಾದ ಹಣಕಾಸು ಮತ್ತು ಸಂವಹನ ಜಾಲಗಳ ಕುರಿತು ವ್ಯಾಪಕ ತನಿಖೆಯ ಮಧ್ಯೆ ಈ ಸಮನ್ಸ್ ನೀಡಲಾಗಿದೆ.
ಇತ್ತೀಚೆಗೆ ಯುಎಇಯಿಂದ ಗಡೀಪಾರಾಗಿರುವ ಸಲೀಂ ಡೋಲಾ ಅವರ ಪುತ್ರ ತಾಹೆರ್ ಡೋಲಾ ಅವರ ವಿಚಾರಣಾ ದಾಖಲೆಗಳಲ್ಲಿ ಓರಿ ಹೆಸರು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.




