
ಮಂಗಳೂರು: ಅಪಾರ್ಟ್ಮೆಂಟ್ ವೊಂದರ ಮಹಡಿಯಿಂದ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ಮಾ.15 ರಂದು ನಡೆದಿದೆ.
ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಸಮರ್ಜಿತ್ (12) ಮೃತಪಟ್ಟ ಬಾಲಕ ಎಂದು ತಿಳಿದು ಬಂದಿದೆ. ಶನಿವಾರ ಮುಂಜಾನೆ ಯಾವುದೋ ಕಾರಣಕ್ಕೆ ಸ್ನೇಹಿತರೊಂದಿಗೆ ವಸತಿ ಸಮುಚ್ಚಯದ ಮಹಡಿಗೆ ತೆರಳಿದ್ದು, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾನೆ.