ಆಸ್ತಿ ವಿಚಾರಕ್ಕಾಗಿ ಸಹೋದರರಿಂದಲೇ ಅಣ್ಣನ ಮರ್ಡರ್!

Share with

ವೀಕ್ಷಕವಾಣಿ: ಆಸ್ತಿ ವಿವಾದ ಹಿನ್ನಲೆಯಲ್ಲಿ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಕುದ್ರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ.

ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದ ನಡೆದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು (ಜು.14) ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.

ಸದ್ಯ ಇವರು ಪುತ್ತೂರಿನ ಸಂಪ್ಯದಲ್ಲಿ ನೆಲೆಸಿದ್ದರು ಎಂದು ತಿಳಿದು ಬಂದಿದೆ. ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *