ಕುಂಬಳೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡಿದ್ದಾರೆ.
ಕಣ್ಣೂರು ಇರಿಕ್ಕೂರ್ ನಿವಾಸಿಗಳಾದ ಅಬ್ದುಲ್ ನಾಸರ್, ನುಸ್ರತ್, ಅಯೂಬ್ ಮತ್ತು ಜಾಫರ್ ಗಾಯಾಳುಗಳು. ಈ ಪೈಕಿ ಗಂಭೀರ ಗಾಯಗೊಂಡಿರುವ ಅಬ್ದುಲ್ ನಾಸರ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಕುಂಬಳೆಯ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.