ಉಡುಪಿ: ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ಬದ್ಧ: ಶಾಸಕ ಯಶ್ ಪಾಲ್ ಸುವರ್ಣ

Share with

ಉಡುಪಿ: ಜಿಲ್ಲೆಯ ಪ್ರಮುಖ ಕೈಗಾರಿಕಾ ಪ್ರದೇಶವಾಗಿರುವ ಮಣಿಪಾಲ ಕೈಗಾರಿಕಾ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೋದ್ಯಮಿಗಳಿಗೆ ಶಾಸಕನ ನೆಲೆಯಲ್ಲಿ ಸಹಕಾರ ನೀಡಲು ಬದ್ಧ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ

ಉಡುಪಿ ನಗರಸಭೆಯ ಎಸ್.ಎಫ್.ಸಿ ನಿಧಿಯಿಂದ 70 ಲಕ್ಷ ವೆಚ್ಚದಲ್ಲಿ ಮಂಜೂರಾದ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಿ ಮಾತನಾಡಿದರು.

ಸುಮಾರು 10 ಕೋಟಿ ವೆಚ್ಚದಲ್ಲಿ ವ್ಯವಸ್ಥಿತ ಚರಂಡಿ, ರಸ್ತೆ ಸಹಿತ ಮೂಲ ಸೌಕರ್ಯಕ್ಕೆ ಮಾಸ್ಟರ್ ಪ್ಲಾನ್ ರಚಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಣಿಪಾಲ ವಾರ್ಡ್ ನಗರಸಭಾ ಸದಸ್ಯೆ ಕಲ್ಪನಾ ಸುಧಾಮ, ಜಿಲ್ಲಾ ಸಣ್ಣ ಕೈಗಾರಿಕೆ ಸಂಘದ ಅಧ್ಯಕ್ಷ ಹರೀಶ್ ಕುಂದರ್, ಪ್ರಮುಖರಾದ ಚಿತ್ತರಂಜನ್ ಭಟ್, ರಿಷಿಕೇಶ್ ಹೆಗ್ಡೆ, ವಲ್ಲಭ್ ಭಟ್, ವಿಶ್ವನಾಥ ಭಟ್, ಜ್ಞಾನಾನಂದ, ವಿನ್ಸೆಂಟ್ ಪಿಂಟೋ, ಕೃಷ್ಣ ಪ್ರಸಾದ್ ಶೆಟ್ಟಿ, ಸ್ಥಳೀಯರಾದ ನಿತಿನ್ ಪೈ, ಪ್ರಥ್ವಿರಾಜ್ ಮೊದಲಾದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *