![](https://i0.wp.com/veekshakavani.com/wp-content/uploads/2024/05/veekshakavani-news-template-2-5.jpg?resize=314%2C400&ssl=1)
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಇಂದು ಉಡುಪಿ ಪೇಜಾವರ ಮಠಕ್ಕೆ ಭೇಟಿ ನೀಡಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.