ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ಮತ್ತು ಬರಗಾಲ ୧ ಘೋಷಣೆಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕ್ಯಾಬಿನೆಟ್ ಸಭೆ ನಡೆಯಲಿದೆ.

ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯುವ ಈ ಸಭೆಯ ಬಳಿಕ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾಧ್ಯಮಗಳಿಗೆ ತಿಳಿಸಲಾಗುವುದು ಎಂದು ಹೇಳಲಾಗಿದೆ. ಈ ಸಭೆಯಲ್ಲಿ ಶಕ್ತಿ ಯೋಜನೆಗೆ, ಗೃಹಜ್ಯೋತಿಗೆ ಸಂಬಂಧಪಟ್ಟ ಅನುದಾನ ಬಿಡುಗಡೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ.