ದೇಶದ ಅಭಿವೃದ್ಧಿಗೆ ಹೊಸ ಗುರಿಗಳನ್ನು ನಿಗದಿಪಡಿಸಲಾಗುವುದು ಎಂದು ಪ್ರಧಾನಿ ಮೋದಿ ರಾಜ್ಯಸಭೆಯಲ್ಲಿ ಹೇಳಿದರು.
ರೈತರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಅನ್ನದಾತರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ತರಲಾಗಿದೆ. PM ಕಿಸಾನ್ ಮೂಲಕ 6 ವರ್ಷಗಳಲ್ಲಿ ₹3,000 ಕೋಟಿ ವಿತರಿಸಲಾಗಿದೆ’ ಎಂದರು. ಈ ಹಿಂದೆ ಅತಿ ಸಣ್ಣ ರೈತರಿಗಾಗಿ ಕಾಂಗ್ರೆಸ್ ಯಾವುದೇ ಯೋಜನೆಗಳನ್ನು ತಂದಿಲ್ಲ ಎಂದು ಪ್ರಧಾನಿ ಟೀಕಿಸಿದರು.