ದೀಪಾವಳಿ ಉಡುಗೊರೆಯಾಗಿ ಶಾಸಕರಿಂದ ಸೀರೆ ವಿತರಣೆ

Share with

ಸಿದ್ದತೆಗಳನ್ನು ಶಾಸಕರು ಪರಿಶೀಲನೆ ನಡೆಸಿದರು.

ಪುತ್ತೂರು: ದೀಪಾವಳಿ ಪ್ರಯುಕ್ತ ಬೃಹತ್ ಸೀರೆ ವಿತರಣಾ ಕಾರ್ಯಕ್ರಮ ನ.13 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಷೆ ಇದ್ದು ಕೈಗೊಂಡಿರುವ ಸಿದ್ದತೆಗಳನ್ನು ಶಾಸಕರು ಪರಿಶೀಲನೆ ನಡೆಸಿದರು.

ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ರೈ ಟ್ರಸ್ಟ್ ನ ಮುಖ್ಯಸ್ಥ ನಿಹಾಲ್ ಶೆಟ್ಟಿ, ನಿವೃತ್ತ ಶಿಕ್ಷಕ ದಯಾನಂದ ರೈ ಕೊರ್ಮಂಡ, ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಯುವ ಕಾಂಗ್ರೆಸ್ ನ ಹನೀಫ್ ಪುಂಚತ್ತಾರ್, ಇಂಜಿನಿಯರ್ ಸಂತೋಷ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಯೋಗೀಶ್ ಸಾಮಾನಿ, ಟ್ರಸ್ಟ್ ನ ಪ್ರಮುಖರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಮೆ, ದಾಮೋದರ್ ಕೋಡಿಂಬಾಡಿ ಮತ್ತಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *