

ವಿಟ್ಲ: ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವೃದ್ಧರೊಬ್ಬರ ಮೇಲೆ ಸಾಕು ನಾಯಿ ದಾಳಿ ನಡೆಸಿ, ಗಾಯಗೊಳಿಸಿದ ಘಟನೆ ವಿಟ್ಲ ದಲ್ಲಿ ನಡೆದಿದೆ.
ಕರೋಪ್ಪಾಡಿ ಗ್ರಾಮದ ಲಕ್ಷ್ಮಣ ಎಂಬವರು ಯಾವುದೊ ವಿಚಾರಕ್ಕೆ ಠಾಣೆಗೆ ದೂರು ನೀಡಲು ತೆರಳಿದ್ದರು. ಈ ಸಂದರ್ಭ ಠಾಣೆಯ ಮುಂಭಾಗ ಇದ್ದ ನಾಯಿ ಅವರ ಮೇಲೆ ಏಕಾಏಕಿ ದಾಳಿ ಮಾಡಿದೆ. ಇದರಿಂದ ಅವರ ಕಾಲಿನ ಮೂರು ಕಡೆ ಕಚ್ಚಿ ಗಾಯಗೊಳಿಸಿದೆ. ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.




