ಪ್ರತಿಭಟನೆಯಿಂದ ಉದ್ವಿಗ್ನಗೊಂಡಿರುವ ಇರಾನ್ನಲ್ಲಿ ಸಿಲುಕಿದ ಭಾರತೀಯರ ಸ್ಥಳಾಂತರ ನಾಳೆಯಿಂದ ಶುರು

Share with

ನವದೆಹಲಿ, ಜನವರಿ 15: ವ್ಯಾಪಕ ಪ್ರತಿಭಟನೆಗಳ ಮಧ್ಯೆ ಭಾರತವು ನಾಳೆಯಿಂದ ಇರಾನ್‌ನಲ್ಲಿ (Iran Protest) ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಲಿದೆ. ಪ್ರತಿಭಟನೆಯಿಂದ ಇರಾನ್ನಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಭಾರತ ಈ ಕ್ರಮ ತೆಗೆದುಕೊಂಡಿದೆ. ಮೂಲಗಳ ಪ್ರಕಾರ, ಸ್ಥಳಾಂತರಿಸುವವರ ಮೊದಲ ಬ್ಯಾಚ್ ಅನ್ನು ನಾಳೆ ಮುಂಜಾನೆಯೇ ವಿಮಾನದಲ್ಲಿ ಕಳುಹಿಸುವ ಸಾಧ್ಯತೆಯಿದೆ.

ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪ್ರದೇಶಗಳಲ್ಲಿನ ಭಾರತೀಯ ವಿದ್ಯಾರ್ಥಿಗಳನ್ನು ಸಂಪರ್ಕಿಸಲು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ, ಹಲವಾರು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳು ಸ್ಥಗಿತಗೊಂಡಿರುವುದರಿಂದ ಮತ್ತು ಫೋನ್ ಲೈನ್‌ಗಳು ಸರಿಯಾಗಿ ಕಾರ್ಯನಿರ್ವಹಿಸದಿರುವುದರಿಂದ ಈ ಪ್ರಕ್ರಿಯೆ ಕೊಂಚ ತಡವಾಗುತ್ತಿದೆ.

ಇರಾನ್‌ನಾದ್ಯಂತ ವ್ಯಾಪಕ ಪ್ರತಿಭಟನೆಗಳ ನಡುವೆ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಕಳವಳಗಳು ಹೆಚ್ಚಾಗಿದೆ. ಇರಾನಿನ ರಿಯಾಲ್‌ನಲ್ಲಿ ಕಳೆದ ತಿಂಗಳ ಕೊನೆಯಲ್ಲಿ ಅಶಾಂತಿ ಪ್ರಾರಂಭವಾಯಿತು. ಅಂದಿನಿಂದ ಪ್ರತಿಭಟನೆ ಎಲ್ಲಾ 31 ಪ್ರಾಂತ್ಯಗಳಿಗೆ ಹರಡಿ, ರಾಜಕೀಯ ಬಿಕ್ಕಟ್ಟಾಗಿ ರೂಪ ತಳೆದಿದೆ. ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಮೇಲೆ ನಡೆಸಲಾದ ನಿಗ್ರಹ ಕಾರ್ಯಾಚರಣೆಯಲ್ಲಿ 3,428 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಂದಾಜಿನ ಪ್ರಕಾರ, ವಿದ್ಯಾರ್ಥಿಗಳು ಸೇರಿದಂತೆ 10,000ಕ್ಕೂ ಹೆಚ್ಚು ಭಾರತೀಯರು ಪ್ರಸ್ತುತ ಇರಾನ್‌ನಲ್ಲಿ ವಾಸಿಸುತ್ತಿದ್ದಾರೆ. ಬುಧವಾರ ಭಾರತವು ಇರಾನ್ ದೇಶದಲ್ಲಿರುವ ಎಲ್ಲಾ ಪ್ರಜೆಗಳಿಗೆ ಲಭ್ಯವಿರುವ ಮಾರ್ಗಗಳ ಮೂಲಕ ತಕ್ಷಣ ಭಾರತಕ್ಕೆ ಹೊರಟುಬರಲು ಸೂಚನೆ ನೀಡಿತ್ತು. ಜೊತೆಗೆ ಸಹಾಯವಾಣಿಯನ್ನೂ ತೆರೆದಿತ್ತು.


Share with

Leave a Reply

Your email address will not be published. Required fields are marked *