ಭಾರೀ ಮಳೆಗೆ ತೋಟ ಮುಳುಗಿದರೂ ತಿಳಿಯಾಗಿ ಸ್ವಚ್ಛಂದವಾಗಿರುವ ಬಾವಿ ನೀರು

Share with



ಪ್ರಕೃತಿಯ ಮಡಿಲಲ್ಲಿ ನಡೆಯುವ ಕೆಲವೊಂದು ವಿಸ್ಮಯ ಸಂಗತಿಗಳು ನಮ್ಮನ್ನು ರೋಮಾಂಚನಗೊಳಿಸುತ್ತದೆ. ಇದೀಗ ಅಂತಹದೊಂದು ರೋಮಾಂಚನಕಾರಿ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಭಾರೀ ಮಳೆಯಿಂದ ನದಿ ತುಂಬಿ ಹರಿದು ಆ ಪ್ರವಾಹದ ನೀರಿನಿಂದ ತೋಟ ಮುಳುಗಿದರೂ, ಆ ತೋಟದಲ್ಲಿ ಇರುವಂತಹ ಬಾವಿಯ ನೀರು ಮಾತ್ರ ತಿಳಿಯಾಗಿಯೇ ಇದೆ. ಈ ಅದ್ಭುತ ದೃಶ್ಯ ನೋಡುಗರಲ್ಲಿ ಅಚ್ಚರಿಯನ್ನು ಉಂಟು ಮಾಡಿದೆ.

ಈ ಬಾರೀ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುಂಗಾರು ಆರ್ಭಟಕ್ಕೆ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವಾರು ಸಾವು ನೋವುಗಳು ಕೂಡಾ ಸಂಭವಿಸಿದೆ. ಇನ್ನೂ ಮಳೆಗಾಲದಲ್ಲಿ ನದಿ-ಹೊಳೆ ನೀರು ಕೆಸರು ಬಣ್ಣಕ್ಕೆ ತಿರುಗುವುದು ಸರ್ವೆಸಾಮಾನ್ಯ. ಅಷ್ಟೇ ಅಲ್ಲದೆ ಬಾವಿ ನೀರು ಕೂಡಾ ಕೊಂಚ ಕೆಸರು ಬಣ್ಣಕ್ಕೆ ತಿರುಗುತ್ತವೆ. ಅಂತದ್ರಲ್ಲಿ ಇಲ್ಲೊಂದು ವಿಸ್ಮಯ ನಡೆದಿದ್ದು, ಭಾರೀ ಮಳೆಗೆ ನದಿ ಹೊಳೆ ತುಂಬಿ ಹರಿದು ತೋಟ ಮುಳುಗಿದರೂ, ಆ ತೋಟದಲ್ಲಿರುವ ಬಾವಿ ನೀರಿಗೆ ಕೆಸರು ನೀರು ಸೋಕದೆ, ಆ ನೀರು ಸ್ವಚ್ಛಂದವಾಗಿ, ತಿಳಿಯಾಗಿಯೇ ಇತ್ತು. ಈ ಅದ್ಭುತ ದೃಶ್ಯ ನೋಡುಗರಲ್ಲಿ ಅಚ್ಚರಿಯನ್ನು ಉಂಟು ಮಾಡಿದೆ.


Share with

Leave a Reply

Your email address will not be published. Required fields are marked *