ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ರವರಿಗೆ ಬೀಳ್ಕೊಡುಗೆ ಸಮಾರಂಭ

Share with

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ರವರಿಗೆ ಬೀಳ್ಕೊಡುಗೆ ಸಮಾರಂಭ ಮೇ 11ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು.ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

ಭಾರತೀಯ ಜೀವ ವಿಮಾ ನಿಗಮದ ಮುಂಬೈ ಕೇಂದ್ರ ಕಚೇರಿಯ ವ್ಯವಸ್ಥಾಪಕ ನಿರ್ದೇಶಕ ಎಂ. ಜಗನ್ನಾಥ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್. ಎಚ್. ಮಂಜುನಾಥ್ ಮತ್ತು ನಳಿನಿ ಮಂಜುನಾಥ್ ದಂಪತಿಯನ್ನು ಸನ್ಮಾನ ಮಾಡಲಾಯಿತು.

ಧರ್ಮಸ್ಥಳದ ಡಾ. ಹೇಮಾವತಿ ವಿ. ಹೆಗ್ಗಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಷ್ಟಿ ಡಿ. ಸುರೇಂದ್ರ ಕುಮಾ‌ರ್, ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್, ಯೋಜನೆಯ ಟ್ರಷ್ಟಿಗಳಾದ ಉದಯ ಕುಮಾರ್ ಶೆಟ್ಟಿ, ಸಂಪತ್ ಸಾಮ್ರಾಜ್ಯ, ಶ್ಯಾಮ್ ಭಟ್, ಮಂಜುನಾಥ್ ರವರ ಪುತ್ರ ರೋಹನ್ ಕುಮಾರ್, ಯೋಜನೆ ಮುಖ್ಯ ಹಣಕಾಸು ಅಧಿಕಾಕಾರಿ ಶಾಂತಾರಾಮ್ ಆರ್. ಪೈ, ಯೋಜನೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು. ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ, ಡಾ.ಹೇಮಾವತಿ ವೀ.ಹೆಗ್ಗಡೆ ದಂಪತಿ ಮತ್ತು ಕುಟುಂಬಸ್ಥರು, ಯೋಜನೆಯಕೇಂದ್ರ ಕಚೇರಿ ಸೇರಿದಂತೆ ಉಡುಪಿ, ಮೈಸೂರು, ಧಾರವಾಡ, ಬೆಂಗಳೂರು, ಉಡುಪಿ, ಕೊಪ್ಪಳ, ಕಲಬುರ್ಗಿ, ಚಿತ್ರದುರ್ಗ ಪ್ರಾದೇಶಿಕ ಕಚೇರಿ, ಜೀವ ವಿಮಾ ನಿಗಮ, ಸಿರಿ ಸಂಸ್ಥೆ, ಜನ ಜಾಗೃತಿ ವೇದಿಕೆ, ಎಸ್‌ ಡಿ ಎಂ ಮೆಡಿಕಲ್ ಟ್ರಸ್ಟ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಗಳ ವತಿಯಿಂದ ಗೌರವಿಸಲಾಯಿತು.


Share with

Leave a Reply

Your email address will not be published. Required fields are marked *