ಕೋಟ: ಬೈಕ್ ಸ್ಕಿಡ್; ಯುವಕ ಸ್ಥಳದಲ್ಲೇ ಮೃತ್ಯು

Share with

ಉಡುಪಿ: ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ. ಕೋಟ ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತದುರ್ದೈವಿ.

ಇವರು ನಿನ್ನೆ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದರು. ಈ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್  ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ವಿಕಾಸ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *