ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತಾ ಅರೋಗ್ಯ ತಪಾಸಣಾ ಶಿಬಿರ

Share with

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ (ರಿ.)ಟ್ರಸ್ಟ್ ವಿಟ್ಲ ಇದರ ಮಾಣಿ ವಲಯದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಂಬಳಬೆಟ್ಟುವಿನಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಕೆ ಎಂ ಸಿ ಆಸ್ಪತ್ರೆ ಅತ್ತಾವರ , ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತಾ ಅರೋಗ್ಯ ತಪಾಸಣಾ ಶಿಬಿರ ನಡೆಯಿತು.


ಕಾರ್ಯ ಕ್ರಮದ ಉದ್ಘಾಟನೆಯನ್ನೂ ವೈದ್ಯನಾಥ ಮಲರಾಯ ಸಹ ಪರಿವಾರ ದೈವಸ್ಥಾನ ಬ್ರಹ್ಮಕಲೊತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕರು ಆಗಿರುವ ವಸಂತ್ ಕುಮಾರ್ ರವರು ನೆರವೇರಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್, ಶಾಲಾ ಮುಖ್ಯ ಶಿಕ್ಷಕಿ ವಾರಿಜಾ, ಅಳಕೆಮಜಲು ಒಕ್ಕೂಟದ ಅಧ್ಯಕ್ಷ ಚಂದ್ರಹಾಸ ನಾಯ್ಕ , ಇಡ್ಕಿದು ಒಕ್ಕೂಟ ಅಧ್ಯಕ್ಷರಾದ ದೇಜಪ್ಪ ಪೂಜಾರಿ , ಉಪಸ್ಥಿತರಿದ್ದರು
ಮಾಣಿ ವಲಯ ಮೇಲ್ವಿಚಾರಕಿ ಆಶಾಪಾರ್ವತಿ ಸ್ವಾಗತಿ, ಅಳಕೆ ಮಜಲು ಒಕ್ಕೂಟದ ಸೇವಾಪ್ರತಿನಿಧಿ ಸುಗಂಧಿನಿ ವಂದಿಸಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿಜಯಲಕ್ಷ್ಮಿ ಕಾರ್ಯ ಕ್ರಮ ನಿರೂಪಿಸಿದರು. ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.


Share with