ಅಡ್ಕತ್ ಬೈಲು ಜನನಿ ಜ್ಞಾನ ವಿಕಾಸ ಕೇಂದ್ರದಲ್ಲಿ ಉಚಿತ ಹೊಲಿಗೆ ತರಬೇತಿಗೆ ಚಾಲನೆ

Share with

ಉಚಿತ ಹೊಲಿಗೆ ತರಬೇತಿಯನ್ನು ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಮಹಾಬಲ ನಾಯ್ಕರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕಾಸರಗೋಡು ವಲಯದ ಅಡ್ಕತ್ ಬೈಲು ಜನನಿ ಜ್ಞಾನ ವಿಕಾಸ ಕೇಂದ್ರದಲ್ಲಿ ಉಚಿತ ಹೊಲಿಗೆ ತರಬೇತಿಯನ್ನು ಶ್ರೀ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಮಹಾಬಲ ನಾಯ್ಕರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಟೈಲರಿಂಗ್ ತರಬೇತಿಯು ಮಹಿಳೆಯರಲ್ಲಿ ಸ್ವ ಉದ್ಯೋಗ ಮಾಡಲು ಪ್ರೇರಣೆಯಾಗಿದ್ದು ಮಾತೃಶ್ರೀ ಹೇಮಾವತಿ ಅಮ್ಮನವರು ಕಲ್ಪಿಸಿಕೊಟ್ಟ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶುಭ ಹಾರೈಸಿದರು. ಒಕ್ಕೂಟದ ಉಪಾಧ್ಯಕ್ಷರಾದ ಜಯಲಕ್ಷ್ಮಿ ಅವರು ಅಧ್ಯಕ್ಷತೆ ವಹಿಸಿದ್ದರು. ವಲಯದ ಮೇಲ್ವಿಚಾರಕಿ ಶ್ರೀಮತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸೌಮ್ಯ, ಟೈಲರಿಂಗ್ ಶಿಕ್ಷಕಿ ಶಕೀಲ, ಸೇವಾ ಪ್ರತಿನಿಧಿ ಚಂಚಲಾಕ್ಷಿ ಹಾಗೂ ತರಬೇತಿ ಪಡೆಯುವ ಸದಸ್ಯರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *