ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ನವಯುಗ ಕಂಪೆನಿಯ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.29ರಂದು ಸಂಜೆ ನಡೆದಿದೆ.
![ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ನವಯುಗ ಕಂಪೆನಿಯ ವಾಹನಕ್ಕೆ ಡಿಕ್ಕಿ](https://i0.wp.com/veekshakavani.com/wp-content/uploads/2024/01/ಗ್ಯಾಸ್-ಟ್ಯಾಂಕರ್-ಅಪಘಾತ.jpg?resize=640%2C400&ssl=1)
ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದು, ಬ್ರಹ್ಮಾವರ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ನವಯುಗ ಕಂಪೆನಿಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
![ಟ್ಯಾಂಕರ್ ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆಂದು ಎನ್ನಲಾಗಿದೆ.](https://i0.wp.com/veekshakavani.com/wp-content/uploads/2024/01/ಅಪಘಾತ-3.jpg?resize=640%2C400&ssl=1)
ಅಪಘಾತಕ್ಕೀಡಾದ ಬಳಿಕ ಟ್ಯಾಂಕರ್ ಅಲ್ಲೇ ಮುಂದೆ ಸಾಗಿ ನಿಂತಿದೆ. ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆಂದು ಎನ್ನಲಾಗಿದೆ. ಅದೃಷ್ಟವಶಾತ್ ಈ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.