ಬ್ರಹ್ಮಾವರ: ಗ್ಯಾಸ್ ಟ್ಯಾಂಕರ್ ಅಪಘಾತ; ಚಾಲಕ ಗಂಭೀರ

Share with

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ನವಯುಗ ಕಂಪೆನಿಯ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.29ರಂದು ಸಂಜೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ನವಯುಗ ಕಂಪೆನಿಯ ವಾಹನಕ್ಕೆ ಡಿಕ್ಕಿ

ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದು, ಬ್ರಹ್ಮಾವರ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ನವಯುಗ ಕಂಪೆನಿಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ಯಾಂಕರ್ ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆಂದು ಎನ್ನಲಾಗಿದೆ.

ಅಪಘಾತಕ್ಕೀಡಾದ ಬಳಿಕ ಟ್ಯಾಂಕರ್ ಅಲ್ಲೇ ಮುಂದೆ ಸಾಗಿ ನಿಂತಿದೆ. ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆಂದು ಎನ್ನಲಾಗಿದೆ. ಅದೃಷ್ಟವಶಾತ್ ಈ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *