ಕುಂಬಳೆ: ಅನಂತಪುರ ಶ್ರೀ ಅನಂತಪದ್ಮನಾಭ ಕ್ಷೇತ್ರಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವರ ದರ್ಶನ ಪಡೆದರು.
![](https://i0.wp.com/veekshakavani.com/wp-content/uploads/2024/01/picsart_24-01-29_21-44-24-0389078441827430141048.jpg?resize=1024%2C640&ssl=1)
ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಚೆಯರ್ ಮೆನ್ ಕುಶಲಪ್ಪ ಕಣ್ಣೂರ್ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಯಪ್ರಕಾಶ್ ಶೆಟ್ಟಿ ನಾರಾಯಣಮಂಗಲ, ಪ್ರಸಾದ್ ಕುಮಾರ್ ಕೃಷ್ಣ ನಗರ ಕುಂಬಳೆ, ಸತೀಶ್ ಕುಮಾರ್, ಹರೀಶ್ ಉಪಸ್ಥಿತರಿದ್ದರು.
![](https://i0.wp.com/veekshakavani.com/wp-content/uploads/2024/01/Picsart_24-01-29_20-21-19-446.jpg?resize=816%2C1024&ssl=1)
ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ಬಗ್ಗೆ ಅವಲೋಕಿಸಿ, ಮಾಹಿತಿ ಪಡೆದು, ಮುಂದಿನ ಕೆಲಸ ಕಾರ್ಯಗಳಿಗೆ ತಮ್ಮಿಂದಾಗುವ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಹಾಲಿಂಗೇಶ್ವರ ಮಾಸ್ಟರ್ ಮಾಹಿತಿ ನೀಡಿದರು. ಈ ಕೆಲಸಕಾರ್ಯಗಳಿಗೆ ಸಹಾಯ ಹಸ್ತ ನೀಡುವಂತೆ ಮನವಿ ಕೂಡಾ ಸಲ್ಲಿಸಿದರು. ಈ ವೇಳೆ ಜೀರ್ಣೋದ್ಧಾರ ಸಮಿತಿ ಸದಸ್ಯರು ಜತೆಗಿದ್ದರು.