ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಯೋಜನಾ ಕಚೇರಿಯ ತುಂಬೆ ವಲಯದ ವ್ಯಾಪ್ತಿಗೆ ಸೇರಿದ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1.50 ಲಕ್ಷ ಅನುದಾನದ ಮಂಜೂರಾಗಿದೆ.
ಮಂಜೂರಾತಿ ಪತ್ರ ವನ್ನು ಶಾಲೆಯ ಶಾಲಾಭಿವೃದಿ ಸಮಿತಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ನರಿಕೊಂಬು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿ ಅಂಚನ್, ಶಾಲಾ ಮುಖ್ಯ ಶಿಕ್ಷಕಿ ಪ್ರೇಮ, ಯೋಜನೆಯ ನರಿಕೊಂಬು ಬಿ ಒಕ್ಕೂಟ ಅಧ್ಯಕ್ಷ ಜಯಂತ, ನರಿಕೊಂಬು ಪಂಚಾಯತ್ ಸದಸ್ಯರಾದ ಚಿತ್ರಾವತಿ, ಸೇವಾ ಪ್ರತಿನಿಧಿಗಳಾದ ಕುಸುಮಾವತಿ, ಪ್ರತಿಭಾ, ಒಕ್ಕೂಟ ಪದಾಧಿಕಾರಿಗಳಾದ ಲೀಲಾವತಿ, ಗುಲಾಬಿ, ಮೊದಲಾದವರು ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಕಿ ಶೋಭಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.