ನಿನ್ನ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಕೇಳಿಬಂದಿದೆ. ‘ಲಕ್ಷಾಂತರ ರೂಪಾಯಿ ದುಡಿಯುವವರಿಗೂ ಫ್ರೀ ಬಸ್ ಯಾಕೆ ಕೊಡಬೇಕು’ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣ ಸಾಕಾಗುತ್ತಿಲ್ಲ ಎಂದು ಈ ಹಿಂದೆಯೂ ಹಲವು ಬಾರಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಸ್ವರವೆತ್ತಿದ್ದಾರೆ.





