ಹೆಡ್​ ಕಾನ್​ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆ

Share with

ಹೆಡ್​ ಕಾನ್​ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿನೋಬನಗರದಲ್ಲಿ ನಡೆದಿದೆ.

ಶಿವಮೊಗ್ಗ: ಇಲ್ಲಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿನೋಬನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಜಯಪ್ಪ ಎಂಬುವವರು ಆತ್ಮಹತ್ಯೆಗೆ ಶರಣಾದ ಹೆಡ್​ ಕಾನ್​ಸ್ಟೇಬಲ್​ ಆಗಿದ್ದು, ಅವರು ಮೂಲತಃ ಹಾವೇರಿ ಜಿಲ್ಲೆಯ ಸಾತನೂರು ಗ್ರಾಮದವರಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಜಯಪ್ಪ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತ್ನಿಯ ಅಗಲಿಕೆಯಿಂದ ತೀವ್ರವಾಗಿ ಮನನೊಂದು ಜಯಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *