ಉಪ್ಪಳ: ಮಂಗಲ್ ಪಾಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ನ.9ರಂದು ಬೆಳಿಗ್ಗೆ ಭೇಟಿ ನೀಡಿ ವಿವಿಧ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.
ಆಸ್ಪತ್ರೆಯಲ್ಲಿ ರಾತ್ರಿ ಕಾಲದಲ್ಲಿದ್ದ ಚಿಕಿತ್ಸೆ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ ಅಲ್ಲದೆ ವಿವಿಧ ಚಿಕಿತ್ಸೆ ಸೌಲಭ್ಯಗಳು ಇಲ್ಲದಿರುವುದು ಇಲ್ಲಿನ ಜನರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಸ್ಥಳೀಯ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಕೂಡ ನಡೆಸಲಾಗಿದೆ. ಸಚಿವರು ಮಾತನಾಡಿ ಆಸ್ಪತ್ರೆಯಲ್ಲಿ ಸೌಲಭ್ಯಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮಂಜೇಶ್ವರ ಶಾಸಕ ಏಕೆ ಎಂ ಅಶ್ರಫ್, ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಅಧ್ಯಕ್ಷ ಸಮೀನಾ ಟೀಚರ್, ಉಪಾಧ್ಯಕ್ಷ ಹನೀಫ್ ಹಾಗೂ ಮಂಗಲ್ ಪಾಡಿ ಜನಕೀಯ ವೇದಿಯ ಪದಾಧಿಕಾರಿಗಳು ಹಾಗೂ ವಿವಿಧ ಪಕ್ಷಗಳ ನೇತಾರರು ಉಪಸ್ಥಿತರಿದ್ದರು.