ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ

Share with

ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಚಾರ್ಮಾಡಿ ಘಾಟಿಯ ಹತ್ತನೆಯ ತಿರುವಿನ ಸಮೀಪ ಉಂಟಾದ ಗುಡ್ಡ ಕುಸಿತದಿಂದಾಗಿ ನೂರಾರು ಸಂಖ್ಯೆಯಲ್ಲಿ ವಾಹನಗಳು ಅಲ್ಲಲ್ಲಿ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿಯುಂಟಾಗಿತ್ತು. ರಾತ್ರಿ ವೇಳೆ ಭೂ ಕುಸಿತವಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಮಣ್ಣು & ಕಲ್ಲುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಯಿತು.


Share with