ಪುತ್ತೂರು-ಸುಳ್ಯ ರಸ್ತೆಯ ಶೇಖಮಲೆ ಬಳಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತ

Share with

ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ  ಶೇಖಮಲೆ ಬಳಿ ಭೂಕುಸಿತ ಸಂಭವಿಸಿದೆ. ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಭೂಕುಸಿತದಿಂದ 4 ವಿದ್ಯುತ್ ಕಂಬಗಳು ಧರೆಗುರುಳಿವೆ. ಗುಡ್ಡ ಕುಸಿತ ಮುಂದುವರಿದಿದ್ದು, ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿವೆ. ಪ್ರಯಾಣಿಕರು ಸಂಬಂಧಪಟ್ಟವರ ಕಾರ್ಯಾಚರಣೆಗಾಗಿ ಕಾಯುತ್ತಿದ್ದಾರೆ. ಪುತ್ತೂರು-ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ ಎಂದು ಸೂಚಿಸಲಾಗಿದೆ.


Share with