ಉಡುಪಿ: ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಉಡುಪಿ ಬೊಮ್ಮರಬೆಟ್ಟುವಿನಲ್ಲಿ ನಡೆದಿದೆ.
![ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ](https://i0.wp.com/veekshakavani.com/wp-content/uploads/2024/02/ಕ್ರೈಂ.jpg?resize=640%2C400&ssl=1)
ಪವನ್, ಚೇತನ್ ಸಿ.ಬಿ, ಪಂಜು ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಈಶ್ವರ ನಗರದ ರೆಸಿಡೆನ್ಸಿಯೊಂದರಲ್ಲಿ ಮಹಿಳೆಯರನ್ನು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡಲಾಗುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಪವನ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಈತ ನೀಡಿದ ಮಾಹಿತಿಯ ಆಧಾರದ ಮೇಲೆ ಉಡುಪಿ ಬೊಮ್ಮರಬೆಟ್ಟುವಿನಲ್ಲಿರುವ ಮನೆಯೊಂದಕ್ಕೆ ದಾಳಿ ಮಾಡಿದ ಪೊಲೀಸರು ಚೇತನ್ ಸಿ.ಬಿ ಮತ್ತು ಪಂಜು ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.