ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸಾವು

Share with


ಮಂಗಳೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ ಸೆ.13ರಂದು ನಡೆದಿದೆ.

ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಬೊಂಡುಕುಮೇರಿಯ ಆಶ್ರಯ ನಿಲಯ ನಿವಾಸಿಯಾದ ಬೈಕ್ ಸವಾರ ಅಶ್ವಿತ್ ಶೆಟ್ಟಿ ಮೃತಪಟ್ಟ ವ್ಯಕ್ತಿಯಾಗಿದ್ದು, ತನ್ನ ಹೊಸ ಬೈಕ್ ಸರ್ವೀಸ್ ಮಾಡಲು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಶ್ವಿತ್ ಶೆಟ್ಟಿ ತನ್ನ ಬೈಕಿನಲ್ಲಿ ಪಡುಬಿದ್ರೆ ಮಾರ್ಗವಾಗಿ ನಂದಿಕೂರು ಮುದರಂಗಡಿ ಜಂಕ್ಷನ್ ಬಳಿ ಹೋಗುತ್ತಿದ್ದ ವೇಳೆ ಮುಂದಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವಾಗ ಎದುರಿನಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ಅಶ್ವಿತ್ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *